
ಮುಲ್ಲಾ ನಸ್ರುದ್ದೀನ್ ಮೇಲಿಂದ ಮೇಲೆ ತನ್ನ ಕತ್ತೆಯನ್ನು ಕಳೆದುಕೊಳ್ಳುತ್ತಿದ್ದ. ಒಮ್ಮೆ ಹೀಗೆ ತನ್ನ ಕಳೆದುಕೊಂಡ ಕತ್ತೆಯನ್ನು ಹುಡುಕುತ್ತ ಮುಲ್ಲಾ ಹಾಡುತ್ತ, ಕುಣಿಯುತ್ತ ಭಗವಂತನಿಗೆ ಧನ್ಯವಾದ ಹೇಳುತ್ತ ಒಂದು ಊರಿನ ರಸ್ತೆಯ ಮೂಲಕ ಹಾಯ್ದು ಹೋಗುತ್ತಿದ್ದ. ಮುಲ್ಲಾ ಇಷ್ಟು ಖುಷಿಯಾಗಿದ್ದನ್ನ ಕಂಡ ಒಬ್ಬ ದಾರಿಹೋಕ ಪ್ರಶ್ನೆ ಮಾಡಿದ. “ಯಾಕೆ ನಸ್ರುದ್ದೀನ್ ಇಷ್ಟು ಖುಷಿಯಾಗಿದ್ದೀಯ? ಯಾರೋ ಹೇಳಿದರು ನಿನ್ನ ನೆಚ್ಚಿನ ಕತ್ತೆ ಕಾಣೆಯಾಗಿದೆಯೆಂದು, ಆದರೂ ನೀನು ಖುಷಿಯಾಗಿದ್ದೀಯಲ್ಲ, ಕತ್ತೆ ಸಿಕ್ತಾ?” ಇನ್ನೂ ಸಿಕ್ಕಿಲ್ಲ ಗೆಳೆಯ ಆದರೆ ಖುಷಿಯ ವಿಷಯ ಏನು ಗೊತ್ತಾ, ಆ ಕತ್ತೆ ಕಳೆದು ಹೋದಾಗ ಅದೃಷ್ಟವಶಾತ್ ನಾನು ಆ ಕತ್ತೆಯ ಮೇಲೆ ಕೂತಿರಲಿಲ್ಲ, ಹಾಗೇನಾದರೂ ಕೂತಿದ್ದರೆ ನಾನೂ ಕಳೆದು ಹೋಗಿ ಬಿಡುತ್ತಿದ್ದೆ ಮುಲ್ಲಾ ತನ್ನ ಖುಷಿಯ ಕಾರಣ ವಿವರಿಸಿದ. ನಸ್ರುದ್ದೀನ್ ಗೆ ಕತ್ತೆ ಸಿಕ್ಕಿದರೂ ಸಂತೋಷ, ಸಿಗದಿದ್ದರೂ ಸಂತೋಷ, ಏಕೆಂದರೆ ಅವನಿಗೆ ಖುಷಿಯಿಂದ ಬದುಕುವ ಕಲೆ ಗೊತ್ತು.